Saturday, August 15, 2009

ಮುಖವಾಡದ ಹಿಂದಿನ ಮುಖಗಳು........

ನಾನು ಸುವರ್ಣ ಮತ್ತು ನನ್ನ ಸಂಬಂಧದ ಬಗ್ಗೆ ಬರೆದ ಕೆಲವು ಮಾತುಗಳಿಗೆ ಹಲವು ಪ್ರತಿಕ್ರಿಯೆಗಳು ಬಂದಿವೆ. ಕೆಲವು ಪ್ರತಿಕ್ರಿಯೆಗಳಲ್ಲಿ ನನ್ನ ಬಗ್ಗೆ ಪ್ರೀತಿ ಮತ್ತು ಗೌರವಗಳಿವೆ. ಅವರಿಗೆ ನಾನು ಕೃತಜ್ನನಾಗಿದ್ದೇನೆ. ಇನ್ನೂ ಕೆಲವು ಪ್ರತಿಕ್ರಿಯೆಗಳನ್ನು ಅನಾಮಿಕರು ಬರೆದಿರುವುದರಿಂದ ಅವರ ಮುಖಗಳು ಕಾಣುವುದಿಲ್ಲ. ಅಂದರೆ ಇದೆಲ್ಲ ಮುಖವಾಡಗಳಿಂದ ಬಂದ ಮಾತುಗಳು. ಆದರೂ ಇಂತಹ ಮುಖಗಳು ನಮ್ಮ ನಡುವಿನ ಮುಖಗಳೇ ಆಗಿರುವುದರಿಂದ ನಾನು ಇದನ್ನು ನಿರ್ಲಕ್ಷಿಸಲಾರೆ. ನಾನು ಸುವರ್ಣದಲ್ಲಿ ಏನು ಮಾಡಿದೆ ಏನು ಮಾಡಿಲ್ಲ ಎಂಬದು ನನಗೆ ಗೊತ್ತಿದೆ. ಆದ್ದರಿಂದ ಈ ಬಗ್ಗೆ ಬೇರೆಯವರ ಹೊಗಳಿಕೆ ನನಗೆ ಬೇಕಿಲ್ಲ. ಇನ್ನು ನಾನು ಮಾಡಿದ ಕಾರ್ಯಕ್ರಮಗಳು ಮಹಾನ್ ಗ್ರೇಟ್ ಎಂದು ನಾನು ಹೇಳಿಕೊಳ್ಳಲಿಲ್ಲ. ನಾನು ಮಾಡುತ್ತಿದ್ದ ಕಾರ್ಯಕ್ರಮಗಳನ್ನು ಇನ್ನು ನಾನು ಮಾಡುತ್ತೇನೆಯೋ ಅಥವಾ ಇಲ್ಲವೋ ಎಂದು ನನಗೆ ನಾನು ಹೇಳಿಕೊಂಡ ಅಂತರಂಗದ ಮಾತುಗಳು ಅವು ಅಷ್ಟೇ. ನಾನು ಮಹಾನ್ ಪತ್ರಕರ್ತ ನಾನು ಮಾಧ್ಯಮದಲ್ಲಿ ಮಹಾನ್ ಸಾಧನೆ ಮಾಡಿದ್ದೇನೆ ಎಂದು ಹೇಳಿಕೊಳ್ಳುವ ವ್ಯಕ್ತಿ ಕೂಡ ನಾನಲ್ಲ. ಇನ್ನು ವಾಹಿನಿಯಲ್ಲಿ ಕೆಲಸ ಮಾಡಿದ ಮಾಡುತ್ತಿರುವ ನನ್ನ ಸಹೋದ್ಯೋಗಿಗಳನ್ನು ಟೀಕೆಯನ್ನು ನಾನು ಮಾಡಿಲ್ಲ. ನಾನು ಪ್ರತಿ ಹಂತದಲ್ಲಿ ನನ್ನ ಹುಡುಗರು ಎಂದು ಹೇಳಿದ್ದೇನೆ. ಹಾಗೆ ಕೆಲವೊಬ್ಬರ ವರ್ತನೆಯ ಬಗ್ಗೆ ವಿಷಾಧದ ಮಾತುಗಳನ್ನು ಆಡಿದ್ದೇನೆ. ಒಂದು ಸಂಸ್ಥೆ ಯಶಸ್ವಿಯಾಗಬೇಕಾದರೆ ಅಲ್ಲಿ ಗುಂಪುಗಾರಿಕೆ ಇರಬಾರದು ಎಂಬ ಕಳಕಳಿಯಿಂದ ಆಡಿದ ಮಾತುಗಳು ಅವು.
ಇದೆಲ್ಲ ನಮ್ಮ ಅನಾಮಿಕ ಅಥವಾ ಮುಖವಾಡದ ಮೂಲಕ ಮಾತನಾಡುವವರಿಗೆ ಅರ್ಥವಾಗುತ್ತದೆ ಎಂದು ನಾನು ನಂಬಿದ್ದೇನೆ. ನನಗೆ ಕುಮ್ರಿಯೇ ಗತಿ ಎಂದು ಒಬ್ಬ ಅನಾಮಿಕರು ಪ್ರತಿಕ್ರಿಯೆ ನೀಡಿದ್ದಾರೆ. ಈ ಮಾತಿನಲ್ಲಿನ ವಿಷ ನನಗೆ ಅರ್ಥವಾಗುತ್ತದೆ. ಆದರೆ ನನಗೆ ಬೇರೆ ಹೊಣೆಗಾರಿಕೆಯನ್ನು ನೀಡಲಾಗಿದೆ ಮತ್ತು ಆ ಹೊಣೆಗಾರಿಕೆಯನ್ನು ನಾನು ನಿರ್ವಹಿಸಲಿದ್ದೇನೆ ಎಂದು ವಿನಯವಾಗಿ ಈ ಮುಖವಾಡ ವ್ಯಕ್ತಿಗೆ ತಿಳಿಸಲು ಬಯಸುತ್ತೇನೆ.
ಮಾಧ್ಯಮದಲ್ಲಿ ಕೆಲಸ ಮಾಡುವಾಗ ನಮ್ಮನ್ನು ವಿರೋಧಿಸುವವರು ಇದ್ದಾರೆ ಎಂದರೆ, ನಮ್ಮನ್ನು ಒಪ್ಪಿಕೊಳ್ಳುವವರೂ ಇದ್ದಾರೆ ಎಂದು ಅರ್ಥ. ಆದರೆ ಮಾತನಾಡುವವರು ತಾವು ಯಾರು ಎಂಬುದನ್ನು ಬಹಿರಂಗಪಡಿಸಿ ಮಾತನಾಡಿದರೆ ಅದಕ್ಕೆ ತೂಕ ಬರುತ್ತದೆ. ಅರ್ಥಪೂರ್ಣವಾಗಿ ಚರ್ಚೆ ಮಾಡಲು ಅವಕಾಶವಾಗುತ್ತದೆ. ಇಂಥಹ ಚರ್ಚೆಗಳಿಗೆ ನಾನು ಸದಾ ಸಿದ್ಧ. ಆದರೆ ಮುಖವಾಡದ ಹಿಂದಿರುವ ಕುರೂಪ ಮುಖಗಳ ಬಗ್ಗೆ ನಾನು ಮಾತನಾಡಲಾರೆ. ಎಲ್ಲಿಯೋ ನಿಂತು ಮನಸ್ಸಿಗೆ ಬಂದ ಹಾಗೆ ಕಿರಿಚುವವರಿಗೆ ಪ್ರತಿಕ್ರಿಯೆ ನೀಡಲಾರೆ.

4 comments:

ಕೈ. ವೆ. ಆದಿತ್ಯ ಭಾರದ್ವಾಜ said...

the faceless blogging especially pertaining to kannada media has been the latest bug bitten the kannada blogaloka. no need to get frustrated about those faceless sniding remarks. please write of something other than these frustrations. this would free you of your frustrations. awaiting for the writer within you..let your blog not be a place to defend yourselves, from the faceless barking. Though I am a small fry in comparison to you, I have taken the privilege of suggesting you something, because you are one of the few journalists I respect and admire much - aditya bharadwaja - http://adiloka.blogspot.com

chanakya said...

an institution bigger than indivisual.this is true.thousands of times that great person bhatji say. when we are working that institution work with profetionely we dont want certificate of anybody...cheer up bhatjiwe are with you forever...

Unknown said...

ಸರ್ ನಿಮ್ಮ ಸುವರ್ಣದ ಬಗೆಗಿನ ಬರಹ ಓದಿ ಓದು ರೀತಿಯಲಿ ಬೇಸರವಾಹಿತು.ಯಾಗೆ ಮಾನವ ಶಕ್ತಿಯನ್ನ ಬಳಸಿ ಗೌರವ ವಿಲ್ಲದೆ ನಡೆಸಿಕೊಳ್ಳುವ ಅಮಾನಾವಿಯ ಕೆಲಸಕ್ಕೆ ನನ್ನ ದಿಕ್ಕಾರವಿರಲಿ.....ಒಮ್ಮೆ ನನ್ನ ಬ್ಲಾಗ್ ಗೆ ಬನ್ನಿ sahayaatri.blogspot.com

Anonymous said...

sir, neevu suvarnadalli naDesi kodta idda chunaavaNaa vishleshaNe nange thumbaa ishtavaagtaa ittu. allade nimmashtu samarthavaagi analyze maaduvavaru bere channel nalli iralilla annodu nanna abhipraaya...

nimma shrama khandita vyartha aagoolla.. ivattalla naale nimage yenu nyaayavaagi sigabeko adu sikkE sigtade...

preetiyinda,
vijayaraj

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...