Sunday, August 12, 2012

ಮುತ್ತಿನ ನಗರಿಯಲ್ಲಿ ನಾಲ್ಕು ದಿನ.......


ನನಗಾಗ ವಯಸ್ಸು ಆರೆಂಟು ವರ್ಷ ಇರಬಹುದು. ನಮ್ಮ ಮನೆಗೆ ಬಂದಿದ್ದ ಜ್ಯೋತಿಷಿಯೊಬ್ಬರು ನನ್ನ ಹಸ್ತವನ್ನು ನೋಡಿ, ಏನ್ ಮಾರಾಯಾ ನಿನಗೆ ಮೂರು ಚಕ್ರಗಳಿವೆ, ಹೀಗಾಗಿ ನೀನು ತ್ರಿಲೋಕ ಸಂಚಾರಿ ಎಂದು ಹೇಳಿದ್ದರು. ಆಗ ನನಗೆ ಈ ತ್ರಿಲೋಕ ಸಂಚಾರದ ಬಗ್ಗೆ ಹೆಚ್ಚಿಗೆ ತಿಳಿದಿರಲಿಲ್ಲ. ಆದರೆ ಆಗಲೇ ಯಕ್ಷಗಾನ ತಾಳಮದ್ದಳೆಗಳನ್ನು ನೋಡಿ ಪುರಾಣಗಳ ಬಗ್ಗೆ ಸ್ವಲ್ಪ ಮಟ್ಟಿಗೆ ತಿಳಿದಿದ್ದ ನನಗೆ ನೆನಪಾಗಿದ್ದು ತ್ರಿಲೋಕ ಸಂಚಾರಿ ನಾರದ. ನಾರದ ಮಹರ್ಷಿ, ಬೇಕೆಂದಾಗಲೆಲ್ಲೆ ಎಲ್ಲ ಲೋಕಗಳಲ್ಲಿ ಪ್ರತ್ಯಕ್ಷವಾಗುವ ಪರಿ ನನಗೆ ತುಂಬಾ ಇಷ್ಟವಾಗಿದ್ದರಿಂದ ನಾನೂ ಸಹ ನಾರದ ಮಹರ್ಷಿಯಂತೆ ಬೇಕೆಂದಾಗ, ಬೇಕಾದಲ್ಲಿ ಪ್ರತ್ಯಕ್ಷವಾಗುವ ಕನಸನ್ನು ಕಂಡು ಸಂತಸ ಪಟ್ಟಿದ್ದೆ.
ಪ್ರಾಯಶಃ ಊರು ಸುತ್ತುವ ಆಸೆ ಆಗಲೇ ನನ್ನ ಮನಸ್ಸಿನಲ್ಲಿ ಮೊಳಕೆ ಒಡೆದಿರಬೇಕು. ಇದಾದ ಮೇಲೆ ನಾನು ಕಾಲೇಜು ವಿದ್ಯಾಭ್ಯಾಸಕ್ಕೆ ಬೆಳಗಾವಿಗೆ ಹೋದಮೇಲೆ ತ್ರಿಲೋಕ ಸಂಚಾರಿ ಆಗದಿದ್ದರೂ ಸಂಚಾರಿಯಂತೂ ಆಗಿದ್ದೆ. ಬೆಳಗಾವಿಗೆ ಹೋದ ತಕ್ಷಣ ಮನೆಯ ನೆನಪಾಗಿ ಹಾಗೆ ಬಸ್ಸು ಹತ್ತು ಊರಿಗೆ ಹೋಗಿ ಬಿಡುವುದು, ಎರಡು ದಿನ ಕಳೆಯುವಷ್ಟ್ರಲ್ಲಿ ಬೆಳಗಾವಿಯ ಆಕರ್ಷಣೆ ಹೆಚ್ಚಾಗಿ ಮತ್ತೆ ಅಲ್ಲಿಗೆ ಹಿಂತಿರುಗುವುದು ನಡದೇ ಇತ್ತು. ನನ್ನ ಈ ಸಂಚಾರಿಯ ಮನಸ್ಸು ಈ ರೀತಿ ರೂಪಗೊಂಡು ನಾನು ಪತ್ರಿಕೋದ್ಯಮಕ್ಕೆ ಬರುವಷ್ಟರಲಿ ಸ್ಪಷ್ಟ ರೂಪ ಪಡೆದಿತ್ತು. ಹೀಗಾಗಿ ಕೆಲಸ ಇರಲಿ ಇಲ್ಲದಿರಲಿ, ಕೈಯಲ್ಲಿ ಹಣ ಇರಲಿ ಇಲ್ಲದಿರಲಿ ನಾನು ಊರು ಸುತ್ತುವುದನ್ನು ಹವ್ಯಾಸವನ್ನಾಗಿ ಮಾಡಿಕೊಂಡೆ. ಮದುವೆಯಾಗಿ ಸಂಸಾರಸ್ಥನಾಗುವುದಕ್ಕೆ ಮೊದಲು ಪ್ರತಿ ವರ್ಷ ಕನಿಷ್ಟ ಒಂದು ತಿಂಗಳು ಉತ್ತರ ಭಾರತವನ್ನು ಸುತ್ತಿ ಬರುತ್ತಿದ್ದೆ. ಈ ತಿರುಗಾಟದಲ್ಲಿ ಯಾವ ರೀತಿಯ ಶಿಸ್ತು, ಪ್ಲಾನು ಏನೂ ಇರುತ್ತಿರಲಿಲ್ಲ  ಕೈಯಲ್ಲಿ ದುಡ್ಡು ಹಿಡಿದುಕೊಂಡು ರೈಲು ಹತ್ತಿ ಕುಳಿತುಕೊಳ್ಳುವುದು, ಊರೂರು ಸುತ್ತಿ ದುಡ್ಡು ಮುಗಿದ ಮೇಲೆ ಹಿಂತಿರುಗುವುದು ನನ್ನ ಜಾಯಮಾನವಾಗಿತ್ತು.
ನಾನು ಕೆಲವರ್ಷಗಳ ಕಾಲ ಡಿಫೆನ್ಸ್ ವರದಿಗಾರನಾಗಿಯೂ ಕೆಲಸ ಮಾಡಿದ್ದರಿಂದ, ಟೂ ಸೀಟರ್ ಯುದ್ಧವಿಮಾನದಲ್ಲಿ, ಸಬ್ ಮೆರಿನ್ ನಲ್ಲಿ ಪ್ರಯಾಣ ಮಾಡುವ ಅವಕಾಶವೂ ನನಗೆ ಲಭ್ಯವಾಗಿತ್ತು. ಬಹುತೇಕ ಎಲ್ಲ ರೀತಿಯ ವಿಮಾನ ಹಡಗುಗಳಲ್ಲಿ ಪ್ರಯಾಣ ಮಾಡಿದ್ದರೂ ರೈಲು ಪ್ರಯಾಣ ನನಗೆ ನೀಡುವ ಖುಷಿಯನ್ನು ಬೇರೆ ಯಾವ ರೀತಿಯ ಪ್ರಯಾಣವೂ ಖುಷಿ ನೀಡಿದ್ದಿಲ್ಲ. ರೈಲಿನಲ್ಲಿ ಪ್ರಯಾಣ ಮಾಡುವಾಗ ನಾವು ನೋಡುವುದು ಮಿನಿ ಇಂಡಿಯಾವನ್ನು. ನಮಗೆ ಗೊತ್ತಿ;ಲ್ಲದ ಹಾಗೆ ಈ ಮಿನಿ ಇಂಡಿಯಾ ಎಂಬ ದೊಡ್ಡ ಸಂಸಾರದ ಸದಸ್ಯರಾಗುವ ಪವಾಡ ನಡೆಯುವುದು ರೈಲಿನಲ್ಲಿ. ಸಮಯವಿದ್ದರೆ ರೈಲು ಸಂಚಾರದ ಸಂತೋಷ ಬೇರೆ ಯಾವ ಪ್ರಯಾಣದಲ್ಲೂ ದೊರಕುವುದಿಲ್ಲ.
ನಾನು ಕಳೆದ ವಾರ ಹೈದರಾಬಾದಿಗೆ ಹೊರಟು ನಿಂತಿದ್ದೆ. ನನ್ನ ಸ್ನೇಹಿತಇಓಗ್ರು ವಿಮಾನದಲ್ಲಿ ಹೋಗಿ ಬಂದು ಬಿಡೋಣ ಎಂದರು. ಆದರೆ ನನಗೆ ವಿಮಾನಕ್ಕಿಂತ ರೈಲಿನಲ್ಲಿ ಹೋಗುವುದು ಒಳ್ಳೆಯದು ಎಂದು ಅನ್ನಿಸತೊಡಗಿತ್ತು. ಅದಕ್ಕೆ ಬಹುಮುಖ್ಯ ಕಾರಣ ವಿಮಾನದಲ್ಲಿ ಹೋಗುವ ತುರ್ತು ಕೆಲಸವೇನೂ ನನಗೆ ಇರಲಿಲ್ಲ. ನಾನು ಕೆಲವರನ್ನು ಭೇಟಿ ಮಾಡಿ ಅವರ ಜೊತೆ ಮಾತನಾಡುವ ಕೆಲಸವಿದ್ದರೂ ರಾತ್ರಿ ರೈಲಿನಲ್ಲಿ ಹೊರಟು ಗಡದ್ ಆಗಿ ನಿದ್ರೆ ಮಾಡಿ ಮರುದಿನ ಪ್ರೆಷ್ ಆಗಿ ಮಾತನಾಡಬಹುದು ಎಂದುಕೊಂಡೆ.
ನಾವು  ಟಿಕೆಟ್  ಬುಕ್ ಮಾಡಿದ್ದು ಕಾಚಿಗುಡಾ ಎಕ್ಸಪ್ರೆಸ್ ರೈಲಿನ ಎಸಿ ಕ್ಲಾಸ್ ನ ಸೀಟನ್ನು. ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನಿಂದ ಹೊರಡುವ ಈ ರೈಲು ಹೈದರಾಬಾದ್ ತಲುಪುವುದು ಮರುದ್ಸಿನ ಬೆಳಿಗ್ಗೆ 5 ಗಂಟೆ ಮೂವತ್ತು ನಿಮಿಷಕ್ಕೆ. ಕರ್ನಾಟಕ ಮತ್ತು ಆಂದ್ರದ ನಡುವೆ ಅಲ್ಲಿಂದಿಲ್ಲಿಗೆ ಓಡಾಡಿ ಕೊನೆಗೆ ಹೈದರಾಬಾದನ್ನು ತಲುಪುವ ರೈಲು. ವಿಮಾನದಲ್ಲಾದರೆ ಕೇವಲ ಮೂವತ್ತೈದು ನಿಮಿಷದಕ್ಕೆ ಹೈದರಾಬಾದನ್ನು  ಸೇರಿ ಬಿಡಬ್ವಹುದು. ಕಣ್ನು ಮುಚ್ಚಿ ಬಿಡುವುದಕ್ಕೆ ಮೊದಲು ಪ್ರಯಾಣ  ಹೀಗಾಗಿ ಪ್ರವಾಸದ ಸಂತೋಷ ವಿಮಾನದಲ್ಲಿ ಸಿಗುವುದಿಲ್ಲ.
ಇದು ಯಶವಂತಪುರ- ಕಾಚಿಗುಡಾ ನಡುವೆ ಸಂಚರಿಸುವ ರೈಲಾದರೂ ಇದರ ಉಪಯೋಗ ಹೆಚ್ಚಾಗಿ ಆಗುವುದು ಆಂದ್ರದವರಿಗೆ. ಈ ರೈಲಿನ ಬಹುತೇಕ ಸೀಟಿಗಳಿಗೆ ಪುಟಪರ್ತಿ, ಅನಂತಪುರದಿಂದ ರಿಸರ್ವೇಷನ್ ಇದೆ. ಹೀಗಾಗಿ ಬೆಂಗಳೂರಿನಿಂದ ಹೈದರಾಬಾದಿಗೆ ಹೋಗ್ಫುವವರಿಗೆ ರಿಸರ್ವೇಶನ್ ಸಿಗುವುದಿಲ್ಲ. ಗುಂತಕಲ್ ವರೆಗೆ ಖಾಲಿ ಸಾಗುವ ರೈಲು ಬೆಂಗಳೂರಿನ ಪ್ರಯಾಣಕರಿಗೆ ಬರ್ತ್ ನೀಡದೇ ತೆಲುಗರಿಗಾಗಿ ಕಾಯುತ್ತದೆ.  ಹಾಗೆ ಇದು ಯಶವಂತಪುರ ಎಂಬ ಕರ್ನಾಟಕದ ರಾಜಧಾನಿಯ ಒಂದು ಭಾಗದಿಂದ ಹೊರಡುವ ರೈಲಾದರೂ ಇಲ್ಲಿನ ಆಡಳಿತ ಭಾಷೆ ತೆಲುಗು ಮತ್ತು ಹಿಂದಿ ! ನೀರು ಕೊಡುವ ಪೋರನಿಂದ, ಕಾಫಿ ಕೊಡುವ ಹೈದನ ವರೆಗೆ ಯಾರಿಗೂ ಕನ್ನಡ ಬರುವಿದಿಲ್ಲ. ಬಂದರೂ ಅವರು ಕನ್ನಡದಲ್ಲಿ ಮಾತನಾಡುವುದಿಲ್ಲ.
ಒಂದು ಕಾಲದಲ್ಲಿ ದಕ್ಷಿಣ ರಲ್ವೆ ಎಂದರೆ ತಮಿಳು ಬಾಷಿಕರ ನೆಲವೀಡಾಗಿತ್ತು. ಅಲ್ಲಿ ಕನ್ನಡಿಗರಿಗೆ ಉದ್ಯೋಗ ಅವಕಾಶ ಇದ್ದುದು ಬಹಳ ಕಡಿಮೆ. ಇತ್ತೀಚಿನ ವರ್ಷಗಳಲ್ಲಿ ಈ ಪರಿಸ್ಥಿತಿ ಬದಲಾಗಿದೆ. ತಮಿಳರು ರಲ್ವೆಯಲಿ ಕೆಲಸ ಮಾಡುವುದನ್ನು ಕಡಿಮೆ ಮಾಡಿ  ಬೇರೆ ಬೇರೆ ಕ್ಷೇತ್ರಗಳತ್ತ ಹೋಗುತ್ತಿದ್ದಾರೆ. ಜೊತೆಗ್ಫೆ ಬಿಹಾರಿಗಳು ಮತ್ತು ಓರಿಸ್ಸಾದವರು ರೈಲ್ವೆಯಲ್ಲಿ ತುಂಬಿ ತುಳುಕುತ್ತಿದ್ದಾರೆ. ಬೆಂಗಾಲಿಗಳಿಗೂ ಉದ್ಯೋಗ ದೊರಕುತ್ತಿದೆ. ಲಾಲೂ ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದಾಗ ಎಲ್ಲೆಡೆ ಬಿಹಾರಿಗಳನ್ನು ತುಂಬಿದರೆ, ಮಮತಾ ದಿದಿ ಬೆಂಗಾಲಿಗಳನ್ನು ತುಂಬಿದರು. ಆದರೆ ಅತಿ ಹೆಚ್ಚು ರೈಲ್ವೆ ಸಚಿವರನ್ನು ನೀಡಿದ ಕನ್ನಡ ನಾಡಿನ ಮಕ್ಕಳಿಗೆ ಮಾತ್ರ ಅಲ್ಲಿ ಉದ್ಯೋಗ ಅವಕಾಶ ಇಲ್ಲ !
ನಾವು ಹೈದರಾಬಾದ್ ತಲುಪಿದಾಗ ಅಲ್ಲಿ ಮಳೆರ್ ಇರಲಿಲ್ಲ. ಆಗಾಗ ಕಳ್ಳ ಬೆಕ್ಕಿನಂತೆ ನುಸುಳಿ ಬಂದು ಹಾಗೆ ಕದ್ದು ಮರೆಯಾಗುವ್ದ ಮಳೆ. ಎನೇ ಇರಲಿ ಈ ಹೈದರಾಬಾದ್ ಎಂಬ ಮುತ್ತಿನ ನಗರಿ ಎಂದರೆ ನನಗೆ ಇಷ್ಟ, ಇದು ಬೆಂಗಳೂರಿನಂತೆ ಇಲ್ಲ. ಬೆಂಗಳೂರು ಎಂದರೆ, ತಳಕು ಬಳಕಿನ ಮಾಯಾಂಗನೆ ಆದರೆ, ಹೈದರಾಬಾದ್ ತನ್ನ ಸಂಪ್ರದಾಯಿಕ ಸೌಂದರ್ಯವನ್ನು ಕಳೆದುಕೊಳ್ಳದ ಸುಂದರಿ. ಜೊತೆಗೆ ಬೆಂಗಳೂರಿನಷ್ಟು ದುಬಾರಿಯ ನಗರವೂ ಅದಲ್ಲ. ತೆಲುಗು ಮತ್ತು ಮುಸ್ಲಿಮ್ ಸಂಸ್ಕೃತಿಯ ಹದವಾದ ಮಿಶ್ರಣವನ್ನು ಇಲ್ಲಿ ಕಾಣಬಹುದು.
ನಾನು ನಾಲ್ಕು ದಿನಗಳ ಕಾಲ ಹೈದರಾಬಾದಿನಲ್ಲಿದ್ದೆ. ನಾನು ಉಳಿದುಕೊಂಡಿದ್ದು  ವೈಷ್ಣೋವಿ ಎಂಬ ಹೋಟೆಲ್ಲಿನಲ್ಲಿ. ಈ ಹೊಟೆಲ್ಲು ಒಂದೆರಡು ಸ್ಟಾರಿನ ಹೋಟೆಲ್ಲಾಗಿದ್ದರೂ ಅಂತಹ ದುಬಾರಿಯಲ್ಲ. ಊಟ ತಿಂಡಿ ಎಲ್ಲವೂ ಅತ್ಯುತ್ತಮ.
ತೆಲುಗಿನಲ್ಲ ಒಟ್ಟು 22 ಕ್ಕೂ ಹೆಚ್ಚು ಸುದ್ದಿ ವಾಹಿನಿಗಳಿವೆ. ಅದಕ್ಕಿಂತ ಹೆಚ್ದ್ಚು ಮನರಂಜನಾ ಚಾನಲ್ ಗಳಿವೆ. ತೆಲುಗಿನಲ್ಲಿರುವ ಒಟ್ಟೂ ಟಿವಿ ಚಾನಲ್ ಗಳ ಸಂಖ್ಯೆ 60 ಕ್ಕೂ ಹೆಚ್ಚು. ಬಹುತೇಕ ಚಾನಲ್ ಗಳಿಗೆ ಸಿನೆಮಾನೇ ಆಹಾರ. ತೆಲುಗರ ಸಿನೆಮಾ ಮೋಹ ಕೂಡ ಅಂತಹುದು. ಅವರು ಸಿನೆಮಾವನ್ನೇ ಉಣ್ಣುತ್ತಾರೆ, ಉಸಿರಾಡುತ್ತಾರೆ. ಜೊತೆಗೆ ತೆಲುಗು ಟೀವಿ ವಾಹಿನಿಗಳ ವಾರ್ಷಿಕ ಒಟ್ಟೂ ವಹಿವಾಟು 1000 ಕೋಟಿಗೂ ಹೆಚ್ಚು. ಕನ್ನಡ ವಾಹಿನಿಗಳ ಒಟ್ಟೂ ವಹಿವಾಟು ಇದರ ಅರ್ಧದಷ್ಟು ಮಾತ್ರ !
ನಾನು ಹೈದರಾಬಾದಿನಲ್ಲಿ ಕೆಲವು ಟೀವಿ ವಾಹಿನಗಳ ಕಚೇರಿಗೆ ಭೇಟಿ ನೀಡಿದೆ. ಸ್ನೇಹಿತ ಪತ್ರಿಕೋದ್ಯಮಿಗಳ ಜೊತೆ ಮಾತುಕತೆ ನಡೆಸಿದೆ.
ಹೊಟೆಲ್ ರೂಮಿನಲ್ಲಿ ಕುಳಿತು ತೆಲುಗು ಚಾನಲ್ ಗಳನ್ನು ವಿಕ್ಷಿಸಿದೆ. ಬಹುತೇಕ ಕೆಬಲ್ ಆಫರೆಟರುಗಳು ಎಲ್ಲ ತೆಲುಗು ವಾಹಿನಿಗಳನ್ನು ಪ್ರಮ್ ಬಾಂಡಿನಲ್ಲೇ ನೀಡುತ್ತಾರೆ. ಉಳಿದ ರಾಷ್ಟ್ಷ್ಟ್ರೀಯ ಮತ್ತು ಪ್ರಾದೇಶಿಕ ವಾಹಿನಿಗಳಿಗೆ ಅಲ್ಲಿ ಅವಕಾಶ ಕಡಿವೆ. ಅಲ್ಲಿ ನನಗೆ ನೋಡಲು ಸಿಕ್ಕ ಏಕಮೇವ ಕನ್ನಡ ವಾಹಿನಿ ಎಂದರೆ ಟೀವಿ ನೈನ್ ಮಾತ್ರ. ನನಗೆ ಅಲ್ಲಿ ಬೇರೆ ಯಾವ ಕನ್ನಡ ವಾಹಿನಿಯೂ ನೋಡಲು ಸಿಗಲಿಲ್ಲ. ಹೈದರಾಬಾದಿನಲ್ಲಿ ಸಾಕ್ಷಷ್ತು ಕನ್ನಡಿಗರಿದ್ದರೂ ಪ್ರಮುಖ ಕನ್ನಡ ವಾಹಿನಿಗಳು ಅಲ್ಲಿ ನೋಡಲು ಸಿಗುವುದಿಲ್ಲ. ಇದನ್ನು ಕರ್ನಾಟಕದ ಜೊತೆ ಬೆಂಗಳೂರಿನ್ಜ ಜೊತೆ ಹೋಲಿಸಿ ನೋಡಿ. ಇಲ್ಲಿ ಕನ್ನಡ ವಾಹಿನ್ಗಳನ್ನು ಪ್ರಸಾರ ಮಾಡುವಂತೆ ಕೇಬಲ್ ಆಫರೇಟರುಗಳಿಗೆ ಮನವಿ ಮಾಡಬೇಕು, ಕ್ಯಾರೇಜ್ ಫಿ ನೀಡಬೇಕು. ಆದರೂ ಕನ್ನಡದ ವಾಹಿನಿಗಳು ಪ್ರೈಮ್ ಬ್ಯಾಂಡಿನಲ್ಲಿ ಸಿಗುವುದಿಲ್ಲ. ಬೆಂಗಳೂರಿನಲ್ಲಿ ಈಗಲೂ ನಂಬರ್ ಒನ್ ಸ್ಥಾನದಲ್ಲಿ ಇರುವುದು ತಮಿಳಿನ ಸನ್ ಟೀವಿ..


4 comments:

Badarinath Palavalli said...

ನಿಮ್ಮ ತ್ರಿಲೋಕ ಸಂಚಾರದ ಕಥನ ಚೆನ್ನಾಗಿದೆ ಸಾರ್. ಹೀಗೆ ಊರುಗಳನ್ನು ನೋಡಲೂ ಅದೃಷ್ಟ ಬೇಕು.

ಭಾರತೀಯ ರೈಲ್ವೇಯ ಕನ್ನಡ ವಿರೋಧಿತನ ಮತ್ತು ರೈಲುಗಳಲ್ಲಿ ನಮಗೆ ಇಲ್ಲದ ಪ್ರಾಶಸ್ಥ್ಯದ ಬಗ್ಗೆ ನಮ್ಮ ಸಂಸದರು ಗಮನಹರಿಸಬೇಹು ಸಾರ್.

ಪ್ರೈಮ್ ಬ್ಯಾಂಡಿನಲ್ಲಿ ಕನ್ನಡ ವಾಹಿನಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸಮರ್ಥವಾಗಿ ಬಿಂಬಿಸಿದ್ದೀರ.

Sheila Bhat said...

nivu nodida urina suddi matra helidri... adre nimmannu hizak madidavaru yaradarU iddare avara suddine illa...

any how lekhana innu swalpa jasti iddare chennagittu annisuvashtu chennagide...

Sheila Bhat said...

nivu nodida urina suddiyashte helidiri. adre nimmannu hizak madidavaru yaradaru iddare avara suddi illave illa...


any how innashtu barediddare chennagittu annuvashtu lekhana chennagide!

ವಿ.ರಾ.ಹೆ. said...

ಖರೇ ಹೇಳ್ತೀನಿ. ನಿಮ್ಮ ಇಡೀ ಬ್ಲಾಗಿನ ಎಲ್ಲಾ ಪೋಸ್ಟ್ ಗಳಲ್ಲಿ ಇಷ್ಟವಾಗಿದ್ದು ಇದು ಮಾತ್ರ. !

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...